ಇಚ್ಲಂಪಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ
ಕಳತ್ತೂರು : ಇಚ್ಲಂಪಾಡಿ ಹಿರಿಯ ಬುನಾದಿ ಶಾಲೆಯಲ್ಲಿ ಗಣರಾಜ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು ಹಿರಿಯ ಅಧ್ಯಾಪಕರಾದ ಯಂ ನರಸಿಂಹ ರಾಜ್ ಧ್ವಜಾರೋಹಣಗೈದು ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು . ಮುಖ್ಯೋಪಾಧ್ಯಾರಾದ ನರಹರಿ ಪಿ . ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷರಾದ ಎಚ್ ಶಿವರಾಮ್ ಭಟ್ , ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಸುಜಾತ ಹಳೆಮನೆ ಶುಭ ಹಾರೈಸಿದರು ಕಾರ್ಯಕ್ರಮದ ಕೊನೆಯಲ್ಲಿ ಸಿಹಿ ತಿಂಡಿ ಹಂಚಲಾಯಿತು